ಪ್ರತೀ ದಿನವೂ ಈತ ನನ್ನನ್ನು ಚುಡಾಯಿಸುತ್ತಿದ್ದ. ಒಂದ್ಸಾರಿ ನನ್ನ ಗಂಡ ಬಂದು ಈತನಿಗೆ ಎಚ್ಚರಿಕೆ ನೀಡಿದ್ದರು ಎಂದು ಮಹಿಳೆ ಬಸವೇಶ್ವರನಗರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಹೇಳಿದ್ದಾರೆ. ಇಷ್ಟೆಲ್ಲಾ ಆದರೂ ಶುಕ್ರವಾರ ಬೆಳಗ್ಗೆ ಮತ್ತೆ ಈತ ಮಹಿಳೆಯನ್ನು ಚುಡಾಯಿಸಿದ್ದಾನೆ, ಕೂಡಲೇ ಆ ಮಹಿಳೆ ತನ್ನ ಪತಿಗೆ ಕರೆ ಮಾಡಿದ್ದಾರೆ. ಮಹಿಳೆಯ ಪತಿ ಸ್ಥಳೀಯರನ್ನೂ ಜತೆಗೆ ಕರೆದುಕೊಂಡು ಬಂದಿದ್ದು, ಆ ಜನರ ಗುಂಪು ಶ್ರೀರಾಮಮೂರ್ತಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.