ಕಲಬುರಗಿ: ಲಾರಿ ಮತ್ತು ಕ್ರೂಸರ್ ಡಿಕ್ಕಿ, ಗಾಯಗೊಂಡಿದ್ದ ಐವರ ಸಾವು

ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ...
ಅಪಘಾತ
ಅಪಘಾತ
Updated on

ಕಲಬುರಗಿ: ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ 14 ಮಂದಿಗೆ ಗಂಭೀರ ಗಾಯಗಳಾಗಿದ್ದು, ಆ ಪೈಕಿ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಕಲಬುರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಚಿಂಚೋಳಿ ತಾಲೂಕಿನ ಎರಕಪಲ್ಲಿ ಗ್ರಾಮದ ನಿವಾಸಿಗಳಾಗಿದ್ದು ಮಹೇಶ್, ತಿಪ್ಪಣ್ಣ ಭುತಾಳೆ, ಶ್ರೀಕಾಂತ್ ಮತ್ತು ತಿರುಪತಿ ಹಾಗೂ ಸಿದ್ದಪ್ಪ ಎಂದು ಗುರುತಿಸಲಾಗಿದೆ.

ರಾಯಚೂರ ಜಿಲ್ಲೆ ಲಿಂಗಸೂಗುರನಲ್ಲಿ ಮದುವೆ ಮುಗಿಸಿಕೊಂಡು ವಾಪಾಸ್ ಬರುತ್ತಿರುವಾಗ ಅಪಘಾತ ಸಂಭವಿಸಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com