ಮೃತಪಟ್ಟ ಕಾರ್ಮಿಕರನ್ನು ತಮಿಳುನಾಡಿನ ಗೌಂಡರ್ ಹಾಗೂ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಜಗನ್ನಾಥ್(24) ಎಂದು ಗುರುತಿಸಲಾಗಿದೆ. ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಇಬ್ಬರು ಕಾರ್ಮಿಕರು ಅಲ್ಲಿ ಸಿಲುಕಿರುವುದನ್ನು ನೋಡಿ ಅವರನ್ನು ರಕ್ಷಿಸಲು ಹೋದ ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ನಿವಾಸಿ ಮಧು(21) ಮತ್ತು ಹಮಾಮ್ ಗ್ರಾಮದ ಮುನಿರಾಜು (22) ಕೂಡಾ ಉಸಿರುಗಟ್ಟಿ ಮೃತಪಟ್ಟಿದ್ದಾರೆ.