ಹಳಿ ಮೇಲೆ ಜೀಪ್ ನಿಲ್ಲಿಸಿ ಯುವಕರ ಚೆಲ್ಲಾಟ, ಜೀಪ್‌‌ಗೆ ರೈಲು ಡಿಕ್ಕಿ

ರೈಲ್ವೆ ಹಳಿ ಮೇಲೆ ಜೀಪ್ ನಿಲ್ಲಿಸಿ ಫೋಟೋ ತೆಗೆಯುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಮಂಗಳಾ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ...
ಅಪಘಾತದ ಚಿತ್ರ
ಅಪಘಾತದ ಚಿತ್ರ

ಬೆಂಗಳೂರು: ರೈಲ್ವೆ ಹಳಿ ಮೇಲೆ ಜೀಪ್ ನಿಲ್ಲಿಸಿ ಫೋಟೋ ತೆಗೆಯುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಮಂಗಳಾ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಜೀಪು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ರಾಮನಗರ ಬಸವನಪುರದ ಬಳಿ ನಡೆದಿದೆ.

ಇಂದು ಬೆಳಗ್ಗೆ 7.20ರ ಸುಮಾರಿಗೆ ನಾಲ್ವರು ರೈಲ್ವೆ ಹಳಿ ಮೇಲೆ ಜೀಪು ನಿಲ್ಲಿಸಿ ಫೋಟೋ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರೈಲು ಬರುತ್ತಿದ್ದನ್ನು ಗಮನಿಸಿದ ಯುವಕರು ಜೀಪನ್ನು ಹೊರತೆಗೆಯಲು ಮುಂದಾಗಿದ್ದಾರೆ. ಆದರೆ ಜೀಪು ಸಮೀಪವಿದ್ದರಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆಗ ತಾನೆ ರಾಮನಗರದ ನಿಲ್ದಾಣದಲ್ಲಿ ನಿಲ್ಲಿಸಿ ನಿಧಾನವಾಗಿ ಬರುತ್ತಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಘಟನೆಯ ಬಳಿಕ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪು ಯಾರಿಗೆ ಸೇರಿದ್ದು, ಹಳಿಯ ಮೇಲೆಕೆ ನಿಲ್ಲಿಸಲಾಗಿತ್ತು, ಹುಡುಗ, ಹುಡುಗಿ ಯಾರು ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಕಲೆಹಾಕಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com