ಬಿಎಸ್ ವೈಗೆ ಲೋಕಾಯುಕ್ತ ಕೋರ್ಟ್ ನಿಂದ ಸಮನ್ಸ್

ಭಾರತೀಯ ಜನತಾ ಪಕ್ಷದ(ಬಿಜಿಪಿ) ನೂತನ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ಶಾಸಕ...
ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ
ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ
Updated on
ಬೆಂಗಳೂರು: ಭಾರತೀಯ ಜನತಾ ಪಕ್ಷದ(ಬಿಜಿಪಿ) ನೂತನ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ಶಾಸಕ ಬಿ ವೈ ರಾಘವೇಂದ್ರ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 
ಲೋಕಾಯುಕ್ತ ಜಿಲ್ಲಾ ನ್ಯಾಯಾಲಯ ಭದ್ರಾವತಿ ತಾಲ್ಲೂಕು ಹುಣಸೇಕಟ್ಟೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಘವೇಂದ್ರ ಸೇರಿದಂತೆ ಏಳು ಜನರಿಗೆ ಸಮನ್ಸ್ ಜಾರಿಗೊಳಿಸಿದೆ. 
ವಕೀಲ ಬಿ ವಿನೋದ್ ಎಂಬುವವರು ಭದ್ರಾವತಿಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆಂದು ಯಡಿಯೂರಪ್ಪ, ರಾಘವೇಂದ್ರ ಸೇರಿದಂತೆ ಏಳು ಜನರ ವಿರುದ್ದ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com