ಗದಗ: ಕಾರಿಗೆ ಸರ್ಕಾರಿ ಬಸ್ ಡಿಕ್ಕಿ, 10 ಮಂದಿ ಸಾವು

ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ...
ಅಪಘಾತ(ಸಂಗ್ರಹ ಚಿತ್ರ)
ಅಪಘಾತ(ಸಂಗ್ರಹ ಚಿತ್ರ)
Updated on

ಗದಗ: ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಸಂಜೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಂದು ಮಗು, ಆರು ಮಹಿಳೆಯರು ಸೇರಿ ಓಮ್ನಿ ಕಾರಿನಲ್ಲಿದ್ದ ಹತ್ತು ಮಂದಿ ಸಾವನ್ನಪ್ಪಿದ್ದು, ಬಸ್ ನಲ್ಲಿ ನಾಲ್ವರಿಗೆ ಗಾಯಗಳಾಗಿವೆ.

ಸರ್ಕಾರಿ ಬಸ್ ಹುಬ್ಬಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿತ್ತು. ಅಪಘಾತ ಬಳಿಕ ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಗದಗ ಎಸ್ ಪಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com