ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ನಂತರ ಮಾತನಾಡಿದ ಸಚಿವ ಟಿಬಿ ಜಯಚಂದ್ರ, ಕೇಂದ್ರ ಸರ್ಕಾರ 1,540 ಕೋಟಿ ಬಿಡುಗಡೆ ಮಾಡಿತ್ತು. ಆ ಹಣವನ್ನು ಸೇರಿ ಇದುವರೆಗೆ ರಾಜ್ಯದಲ್ಲಿ ಬರ ಪರಿಹಾರಕ್ಕೆ ರು.2,060 ಕೋಟಿ ಖರ್ಚು ಮಾಡಲಾಗಿದೆ. ಈಗ ಮತ್ತೆ ಕುಡಿಯುವ ನೀರಿಗೆ ಹೆಚ್ಚುವರಿಯಾಗಿ ರು.100 ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.