ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರೌಡಿ ಸಂದೀಪ್ ಶೆಟ್ಟಿ ಕೊಲೆ; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ರೌಡಿ ಸಂದೀಪ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
Published on
ಮಂಗಳೂರು: ರೌಡಿ ಸಂದೀಪ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 
ಕುಖ್ಯಾತ ರೌಡಿ ಬನ್ನಂಜೇ ರಾಜನ ಸಹಚರನಾಗಿದ್ದ ರೌಡಿ ಸಂದೀಪ್ ಶೆಟ್ಟಿಯನ್ನು ಕೇಶವ ಯಾನೆ ಚೋನಿ, ಪ್ರಿತೇಶ್, ಅವಿನಾಶ್ ಎಂಬವರು 2011 ರ ನವಂಬರ್ 13 ನೇ ರಾತ್ರಿ  ಸೋಮೇಶ್ವರದ ಸಂದೀಪನ ಮನೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದರು. 
ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಉಲ್ಲಾಳ ಪೊಲೀಸರು ಚೋನಿ, ಪ್ರಿತೇಶ್, ಅವಿನಾಶ್  ಬಂಧಿಸಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಮಂಗಳೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com