ಬೆಂಗಳೂರಿನಲ್ಲಿ ಜೋಡಿ ಕೊಲೆ ಪ್ರಕರಣ: ಆರೋಪಿ ಬಂಧನ

ಕಳೆದ ಎರಡು ದಿನಗಳ ಹಿಂದೆ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ರಸ್ತೆಯಲ್ಲಿ ನಡೆದ ವೃದ್ಧ ದಂಪತಿ ಪರ್ವತರಾಜ್(60) ಹಾಗೂ ಚಂದ್ರಕಲಾ(55) ಕೊಲೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ರಸ್ತೆಯಲ್ಲಿ ನಡೆದ ವೃದ್ಧ ದಂಪತಿ ಪರ್ವತರಾಜ್(60) ಹಾಗೂ ಚಂದ್ರಕಲಾ(55) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನ ಮಂಗಳವಾರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಯನ್ನು ಕೆ.ಜಿ.ಹಳ್ಳಿ ನಿವಾಸಿ ಪ್ರೇಮಚಂದ್ ಜೈನ್(35) ಎಂದು ಗುರುತಿಸಲಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಪ್ರೇಮಚಂದ್ ಕಳೆದ ಹದಿನೈದು ವರ್ಷದಿಂದ ದಂಪತಿಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಚಂದ್ರಶೇಖರ್(36)ಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಂಪತಿ ಬಳಿ ಅಪಾರ ಪ್ರಮಾಣದ ಹಣ, ಆಭರಣ ಇರುವ ಬಗ್ಗೆ ತಿಳಿದಿದ್ದ ಆರೋಪಿ ಪ್ರೇಮಚಂದ್, ಆಗಾಗ ವೃದ್ಧ ದಂಪತಿಯಿಂದ ಸಾಲ ಪಡೆಯುತ್ತಿದ್ದ ಎನ್ನಲಾಗಿದೆ. ಏಪ್ರಿಲ್ 22ರಂದು ದಂಪತಿ ಮನೆಗೆ ತನ್ನ ಸ್ನೇಹಿತ ಚಂದ್ರಶೇಖರನೊಂದಿಗೆ ಹೋಗಿದ್ದ ಪ್ರೇಮ್ ಚಂದ್ 50 ಸಾವಿರ ಹಣ ಕೇಳಿದ್ದು, ಈ ವೇಳೆ ಪರ್ವತರಾಜ್ ಹಣ ನೀಡಲು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಗಳು ದಂಪತಿಯನ್ನು ಕೊಲೆಮಾಡಿದ್ದರು. ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com