ಚಿಕ್ಕಮಗಳೂರು: ಶಾಲಾ ಬಸ್ ಪಲ್ಟಿ, ಓರ್ವ ಬಾಲಕ ಸ್ಥಳದಲ್ಲೇ ಸಾವು

ಖಾಸಗಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಮತ್ತು 10ಕ್ಕೂ ಹೆಚ್ಚು ಮಕ್ಕಳು ...
ಪಲ್ಟಿಯಾದ ಬಸ್
ಪಲ್ಟಿಯಾದ ಬಸ್
Updated on
ಚಿಕ್ಕಮಗಳೂರು: ಖಾಸಗಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಮತ್ತು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಬಳಿಯ ನಾರಾಯಣಪುರ ಗೇಟ್‌‌ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಪ್ರೀತಂ (4) ಎಂದು ಗುರುತಿಸಲಾಗಿದೆ. ಈತ ಹಿರೇನಲ್ಲೂರಿನ ಪ್ರಮೋದ್ ಎಂಬುವರ ಮಗನಾಗಿದ್ದಾನೆ. ಬಸ್‌ನಲ್ಲಿ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಯಾಣ ಮಾಡುತ್ತಿದ್ದರು. ಘಟನೆಯಿಂದ 15ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. 
ಮೂರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ತರೀಕೆರೆ ಮತ್ತು ಅಜ್ಜಂಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ಓರ್ವ ವಿದ್ಯಾರ್ಥಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com