ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ಸೇರಿದ್ದ ಮೈಸೂರು ದಸರಾ ಸಮಿತಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಖ್ಯಾತ ಕವಿ ನಿಸಾರ್ ಅಹ್ಮದ್, ಎಸ್ ಎಲ್ ಬೈರಪ್ಪ, ಸುತ್ತೂರು ಮಠದ ಶ್ರೀಗಳಾದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅಥವಾ ಚೆನ್ನವೀರ ಕಣವಿ ಅವರಿಂದ ದಸರೆಗೆ ಉದ್ಧಾಟನೆ ಮಾಡಿಸುವ ಕುರಿತು ಪ್ರಸ್ತಾಪವಾಗಿತ್ತು. ಆದರೆ ಅಂತಿಮವಾಗಿ ದಸರಾ ಸಮಿತಿ ಚೆನ್ನವೀರಕಣವಿ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗುತ್ತಿದೆ.
ಇದೇ ಮಂಗಳವಾರ ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಇದೇ ಅಕ್ಟೋಬರ್ 1ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
Advertisement