ಕೊನೆಗೂ ರಾಜ್ಯಪಾಲರ ಗ್ರೀನ್ ಸಿಗ್ನಲ್: ಕೆಪಿಎಸ್ಸಿ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕ

ಕರ್ನಾಟಕದ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕಗೊಂಡಿದ್ದಾರೆ...
ಶ್ಯಾಂ ಭಟ್
ಶ್ಯಾಂ ಭಟ್
ಬೆಂಗಳೂರು: ಕರ್ನಾಟಕದ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕಗೊಂಡಿದ್ದಾರೆ. 
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಆಯುಕ್ತ ಟಿ. ಶ್ಯಾಂ ಭಟ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು. ಸರ್ಕಾರದ ಈ ಶಿಫಾರಸ್ಸಿಗೆ ಕೊನೆಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ. 
ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಶ್ಯಾಂ ಭಟ್ ಅವರನ್ನು ನೇಮಿಸಲು ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಬಂದಿದ್ದರಿಂದ ರಾಜ್ಯಪಾಲರು ಕಡತವನ್ನು ವಾಪಸ್ಸು ಕಳುಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com