ಮರಿಗೌಡ ಜಾಮೀನು ಅರ್ಜಿ ವಜಾ, ಸಿಎಂ ಆಪ್ತನಿಗೆ ಜೈಲೇ ಗತಿ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಕೆ ಮರಿಗೌಡ
ಕೆ ಮರಿಗೌಡ
Updated on
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಮರಿಗೌಡ ಸಲ್ಲಿಸಿದ್ದ ಅರ್ಜಿಯನ್ನು ನಗರದ 3ನೇ ಜೆಎಂಎಫ್ ನ್ಯಾಯಾಲಯ ಇಂದು ವಜಾ ಮಾಡಿದ್ದು, ಇದರಿಂದ ಮರಿಗೌಡ ಜೈಲುವಾಸ ಮುಂದುವರಿದಂತಾಗಿದೆ.
ಸುಮಾರು ಒಂದು ತಿಂಗಳ ನಂತರ ಪೊಲೀಸರಿಗೆ ಶರಣಾದ ಮರಿಗೌಡ ಅವರನ್ನು ನಜರ್ ಬಾದ್ ಪೊಲೀಸರು ಮೈಸೂರಿನ ಮೂರನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಯನ್ನು ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಕಡೆಗೂ ಬುಧವಾರ ಪೊಲೀಸರಿಗೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com