ಮಣಿಪಾಲ ಪೊಲೀಸರು ನಿನ್ನೆಯಷ್ಟೇ ಬೀದರ್ ನಲ್ಲಿ ನಿರಂಜನ್ ಭಟ್ ನನ್ನು ಬಂಧಿಸಿದ್ದರು. ಈಗ ಪೊಲೀಸ್ ವಶದಲ್ಲಿರುವ ಭಟ್ ಇಂದು ಕೈ ಬೆರಳಿನಲ್ಲಿದ್ದ ವಜ್ರದುಂಗುರವನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಉಡುಪಿಯ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.