ಮರಿಗೌಡ ಜೈಲು ಪಾಲಾದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಶಿಖಾ ಎತ್ತಂಗಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರ ವಿರುದ್ಧ ದೂರು...
ಸಿ ಶಿಖಾ
ಸಿ ಶಿಖಾ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರ ವಿರುದ್ಧ ದೂರು ನೀಡಿ, ಜೈಲಿಗೆ ಕಳುಹಿಸಿದ್ದ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ಬುಧವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶಿಖಾ ಸೇರಿದಂತೆ ಒಟ್ಟು 11 ಐಎಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಿರುವ ಸರ್ಕಾರ, ಜಿಲ್ಲಾಧಿಕಾರಿ ಹುದ್ದೆಯಿಂದ ಶಿಖಾ ಅವರನ್ನು ಎತ್ತಂಗಡಿ ಮಾಡಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಿದೆ. 
ಸದ್ಯ ಜೈಲಿನಲ್ಲಿರುವ ಸಿಎಂ ಆಪ್ತ ಮರಿಗೌಡ ಅವರು ಕಳೆದ ಜುಲೈ 3ರಂದು ಶಿಖಾ ಅವರಿಗೆ ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಖಾ ಅವರು ಜುಲೈ 3ರಂದೇ ಸಂಜೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಸಿಎಂ ಆಪ್ತನ ವಿರುದ್ಧ ದೂರು ದಾಖಲಿಸಿದ್ದರು. 
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮರಿಗೌಡ ಸುಮಾರು ಒಂದು ತಿಂಗಳ ನಂತರ ಪೊಲೀಸರಿಗೆ ಶರಣಾಗಿದ್ದರು. ನಂತರ ಕೋರ್ಟ್ ಆರೋಪಿಯನ್ನು ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com