ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ವಿನೋದ್ ಯಡಿಯೂರಪ್ಪ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಿತ್ತು. ಅದಾಗ್ಯೂ ಬಿ ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು, ಸೈಟ್ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿದ್ದರು. ಕೊನೆಗೆ ಬಿ ವರದಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ತಿರಸ್ಕರಿಸಿ ಯಡಿಯೂರಪ್ಪ ಮತ್ತು ಇತರರಿಗೆ ಸಮ್ಮನ್ಸ್ ಜಾರಿ ಮಾಡಿತ್ತು.