ಧ್ವಜಾರೋಹಣದ ನಂತರ ದಿಢೀರ್ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

70ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಂದಾಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ...
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ

ಶಿವಮೊಗ್ಗ: 70ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಂದಾಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ಮಾಡಿದ ನಂತರ ಕುಸಿದು ಬಿದ್ದಿದ್ದಾರೆ.

ದಿಢೀರ್ ಅಸ್ವಸ್ಥಗೊಂಡ  74 ವರ್ಷದ ಕಾಗೋಡು ತಿಮ್ಮಪ್ಪ ಅವರನ್ನು ಕೂಡಲೇ ಸ್ಥಳೀಯ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಕಾಗೋಡು ತಿಮ್ಮಪ್ಪ ಭಾಷಣ ಮಾಡುತ್ತಿದ್ದರು. ಸುಮಾರು 15 ನಿಮಿಷ ಭಾಷಣ ಮಾಡಿದ ನಂತರ ತಿಮ್ಮಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com