ಈ ಬಗ್ಗೆ ಪ್ರತಿಕ್ರಿಯಿಸರುವ ಬಿಬಿಎಂಪಿ ಜಂಟಿ ಆಯುಕ್ತ ಡಾ.ವೀರಭದ್ರಪ್ಪ ಅವರು, ಬಿಬಿಎಂಪಿ, ಕಂದಾಯ ಹಾಗೂ ಸರ್ವೇ ಅಧಿಕಾರಿಗಳು ದರ್ಶನ್ ಅವರ ಮನೆ ಇರುವ ಪ್ರದೇಶದಲ್ಲಿ ಸರ್ವೇ ನಡೆಸಲಿದ್ದಾರೆ. ಒಂದು ವೇಳೆ ದರ್ಶನ್ ಅವರ ಮನೆ ಒತ್ತುವರಿ ಜಾಗದಲ್ಲಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.