ಇನ್ನೆರಡು ದಿನಗಳಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ನಡೆಯುವ ಸಾಧ್ಯತೆಯಿದ್ದು ಇದಕ್ಕಾಗಿ ಆಕಾಂಕ್ಷಿಗಳು ತಮ್ಮ ನಾಯಕರ ಹಿಂದೆ ಓಡಾಡುತ್ತಿದ್ದಾರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ .ಸಿ.ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಮನೆ-ಕಚೇರಿ ಬಾಗಿಲಿಗೂ ಎಡತಾಕುತ್ತಿದ್ದಾರೆ. ಅನೇಕರು ತಮ್ಮ ಹತ್ತಿರದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ.