ಅನೇಕಲ್: ಸರ್ಜಾಪುರದ ತ್ಯಾವಕನಹಳ್ಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆ ಹೊತ್ತಿ ಉರಿದಿದೆ.
ಅತ್ತಿಬೆಲೆಯಿಂದ ಸರ್ಜಾಪುರ ಕಡೆ ಹೊರಟಿದ್ದ ಬಿಎಂಟಿಸಿ ಮಿನಿ ಬಸ್ ಬೆಂಕಿಗಾಹುತ್ತಿಯಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ 35ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement