ವಾನ್ ಡ್ರೈವರ್ ಮಂಜು, ಬಿಷಪ್ ಕಾಟನ್ ಶಾಲೆಯ 30ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ನೃಪತುಂಗ ರಸ್ತೆಯಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದ. ಆಗ ಹಲಸೂರು ಗೇಟ್ ಸಂಚಾರಿ ಠಾಣೆ ಪೊಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಪಾನಮತ್ತನಾಗಿರುವುದು ಗೊತ್ತಾಯಿತು. ವ್ಯಾನಿನಲ್ಲಿ ಮಿತಿಗಿಂತ ಜಾಸ್ತಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ. ಆತನ ಬಳಿ ಚಾಲನೆ ಪರವಾನಗಿ ಪತ್ರ ಕೂಡ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ನಾವು ವಾಹನವನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.