ಮಂಗಳೂರು: ಕಟೀಲು ದುರ್ಗ ಪರಮೇಶ್ವರಿ ಬಗ್ಗೆ ಅಶ್ಲೀಲ ಪದ ಬಳಕೆ, ದೂರು ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ..
ಕಟೀಲು ದುರ್ಗಾ ಪರಮೇಶ್ವರಿ
ಕಟೀಲು ದುರ್ಗಾ ಪರಮೇಶ್ವರಿ
Updated on

ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ  ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ  ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿ ಸಿ ರಸ್ತೆಯ ಜಬ್ಬಾರ್ ಎಂಬಾತ ಈ ಪೋಸ್ಟ್ ಹಾಕಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಹಿಂದೂಗಳನ್ನು ಪ್ರಚೋದಿಸುವ ರೀತಿಯ ಪೋಸ್ಟ್ ಗಳಿದ್ದು. ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಟೀಲು ದುರ್ಗಾ ಪರಮೇಶ್ವರಿ ಬಗ್ಗೆ ಆರೋಪಿ ಅಶ್ಲೀಲ ಭಾಷೆ ಬಳಸಿದ್ದು, ಉಲ್ಲಾಳದ ಕರಾವಳಿ ಸಾಂಸ್ಕೃತಿಕ ಪರಿಷತ್ ಈ ಸಂಬಂಧ ಪೊಲೀಸರಿಗೆ ಮನವಿ ಸಲ್ಲಿಸಿದೆ.

ಇದುವರೆಗೂ ಆರೋಪಿಯವನ್ನು ಬಂಧಿಸಿಲ್ಲ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅರೋಪಿಯನ್ನು ಬಂಧಿಸಬೇಕೆಂದು  ಕರಾವಳಿ ಸಾಂಸ್ಕೃತಿಕ ಪರಿಷತ್ ಪೊಲೀಸರನ್ನು ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com