ಮಂಗಳೂರು: ಕಟೀಲು ದುರ್ಗ ಪರಮೇಶ್ವರಿ ಬಗ್ಗೆ ಅಶ್ಲೀಲ ಪದ ಬಳಕೆ, ದೂರು ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ..
ಕಟೀಲು ದುರ್ಗಾ ಪರಮೇಶ್ವರಿ
ಕಟೀಲು ದುರ್ಗಾ ಪರಮೇಶ್ವರಿ

ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ  ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ  ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿ ಸಿ ರಸ್ತೆಯ ಜಬ್ಬಾರ್ ಎಂಬಾತ ಈ ಪೋಸ್ಟ್ ಹಾಕಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಹಿಂದೂಗಳನ್ನು ಪ್ರಚೋದಿಸುವ ರೀತಿಯ ಪೋಸ್ಟ್ ಗಳಿದ್ದು. ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಟೀಲು ದುರ್ಗಾ ಪರಮೇಶ್ವರಿ ಬಗ್ಗೆ ಆರೋಪಿ ಅಶ್ಲೀಲ ಭಾಷೆ ಬಳಸಿದ್ದು, ಉಲ್ಲಾಳದ ಕರಾವಳಿ ಸಾಂಸ್ಕೃತಿಕ ಪರಿಷತ್ ಈ ಸಂಬಂಧ ಪೊಲೀಸರಿಗೆ ಮನವಿ ಸಲ್ಲಿಸಿದೆ.

ಇದುವರೆಗೂ ಆರೋಪಿಯವನ್ನು ಬಂಧಿಸಿಲ್ಲ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅರೋಪಿಯನ್ನು ಬಂಧಿಸಬೇಕೆಂದು  ಕರಾವಳಿ ಸಾಂಸ್ಕೃತಿಕ ಪರಿಷತ್ ಪೊಲೀಸರನ್ನು ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com