ಇತ್ತೇಚೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವದೇಕರ್ ಲೋಕಸಭೆಯಲ್ಲಿ ಹೇಳಿಕೆ ನೀಡಿ, ಕರ್ನಾಟಕದಲ್ಲಿ 1.22 ಲಕ್ಷ ಶಾಲೆಯಿಂದ ಹೊರಗುಳಿದಿರುವ ಮಕ್ಕಳಿದ್ದಾರೆ ಎಂದಿದ್ದರು. ಈ ಸಂಖ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸರ್ವ ಶಿಕ್ಷಾ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಸಿ.ಪಿ.ಜಾಫರ್, ನಮ್ಮ ಮೊದಲ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 1.20 ಲಕ್ಷ ಮಂದಿ ಮಕ್ಕಳು ಶಾಲೆಗೆ ಹೋಗದೆ ಉಳಿದಿದ್ದಾರೆ ಎಂದು ತಿಳಿದುಬಂದಿತ್ತು. ನಂತರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ಜನವರಿ 2016ರಲ್ಲಿ ಮರು ಸಮೀಕ್ಷೆ ನಡೆಸಿದಾಗ ಶಾಲೆಗೆ ಹೋಗದಿರುವ ಮಕ್ಕಳ ಸಂಖ್ಯೆ 9,000 ಕಂಡುಬಂತು ಎಂದಿದ್ದಾರೆ.