ನೈಸ್ ಕಂಪನಿ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಲಿ: ದೇವೇಗೌಡರ ಆಗ್ರಹ

ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯ ಅಕ್ರಮವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
Updated on

ಬೆಂಗಳೂರು: ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯ ಅಕ್ರಮವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಎಂಐಸಿ ಯೋಜನೆಯಲ್ಲಿ ನೈಸ್‌ ಕಂಪನಿ ಅಕ್ರಮ ನಡೆಸಿರುವುದು ಸದನ ಸಮಿತಿ ತನಿಖೆಯಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಸರಕಾರ ಸ್ವಾಧೀನಕ್ಕೆ ತೆಗೆದುಕೊಂಡು, ಹಗರಣದ ಸಮಗ್ರ ವಿವರ ಬಯಲಿಗೆ ಬರಲು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

'ನೈಸ್‌ ಕಂಪನಿ ಮಾಲೀಕರು ನಯಾಪೈಸೆ ಖರ್ಚು ಮಾಡದೆ ಅಮಾಯಕ ರೈತರು ಹಾಗೂ ಸರಕಾರದ ಸಾವಿರಾರು ಎಕರೆ ಪಡೆದುಕೊಂಡು ವಂಚಿಸಿದ್ದಾರೆ. ನೈಸ್‌ ನಿರ್ಮಿಸಿದ ಈ ಎಲ್ಲ ಬಡಾವಣೆಗಳು ಅನಧಿಕೃತ ಎಂದು ಸರಕಾರದ ಸಂಸ್ಥೆಗಳೇ ವರದಿ ನೀಡಿವೆ. ಹೀಗಾಗಿ ಸರಕಾರ ಬೆಂಗಳೂರಲ್ಲಿ  ಬಡವರ ಮನೆ ಧ್ವಂಸ ಮಾಡಿದಂತೆ ನೈಸ್‌ನ ಬಡಾವಣೆಗಳನ್ನು ತೆರವು ಮಾಡಲಿ. ಸಿಎಂ ಸಿದ್ದರಾಮಯ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com