ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ರಾಜ್ಯ ಪಠ್ಯಕ್ರಮದ ಪುಸ್ತಕಗಳನ್ನೇ ಬಳಸಲಾಗುವುದು ಹೊರತು ಎನ್ ಸಿಇಆರ್ ಟಿ ಪಠ್ಯಕ್ರಮದ ಪುಸ್ತಕಗಳನ್ನಲ್ಲ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಈ ವರ್ಷಾಂತ್ಯಕ್ಕೆ ಎಲ್ಲಾ ಭಾಷಾ ಅಧ್ಯಯನ ಪರಿಷ್ಕೃತ ಪಠ್ಯಪುಸ್ತಕಗಳು ಮುದ್ರಣಕ್ಕೆ ಸಿದ್ದವಾಗಲಿದ್ದು ಇತರ ಪಠ್ಯಪುಸ್ತಕಗಳು ಜನವರಿ ಮಧ್ಯಭಾಗದ ಹೊತ್ತಿಗೆ ಸಿದ್ಧವಾಗಲಿದೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.