ದಕ್ಷಿಣ ವಿಭಾಗದ ಬನಶಂಕರಿ, ಕನಕಪುರ ರಸ್ತೆ, ರಿಂಗ್ ರಸ್ತೆಗಳಲ್ಲಿ ಅನಧಿಕೃತ ಖಾಸಗಿ ಬಸ್ ಗಳು ಸಂಚರಿಸುತ್ತಿವೆ ಎಂಬ ದೂರುಗಳು ಬಂದಿದ್ದವು. ಹೀಗಾಗಿ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 178 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಜ್ಞಾನೇಂದ್ರ ಕುಮಾರ್ ತಿಳಿಸಿದ್ದಾರೆ.