ಇದೇ 29ರಂದು ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕುವೆಂಪುರವರ ವಿಶ್ವ ಮಾನವ ಸಂದೇಶದ ಬಗ್ಗೆ ಮಾತನಾಡಲು ಪ್ರಮುಖ ಸಾಹಿತಿಯೊಬ್ಬರನ್ನು ಆಹ್ವಾನಿಸಲಾಗುವುದು. ಉಳಿದ ಎಲ್ಲಾ ಜಯಂತಿಗಳಂತೆ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಕೂಡ ಎಲ್ಲಾ ಸರ್ಕಾರಿ ನೌಕರರು ಭಾಗವಹಿಸಬೇಕು ಎಂದರು.