ಬೆಂಗಳೂರು: ಸಣ್ಣ ಪಟ್ಟಣ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಭೂಮಿಗಳಲ್ಲಿ ಮನೆ ಕಟ್ಟಿಕೊಂಡವರ ಸ್ಥಳದ ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಗಡುವನ್ನು ಸರ್ಕಾರ ಮತ್ತೆ ಒಂದು ತಿಂಗಳು ವಿಸ್ತರಿಸಿದೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ಗ್ರಾಮೀಣ ಭಾಗದ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಸಕ್ರಮೀಕರಣ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಡಿಸೆಂಬರ್ 20ರವರೆಗೆ ಗಡುವು ನೀಡಲಾಗಿತ್ತು. ಅದನ್ನು ಮತ್ತೆ ಜನವರಿ 21ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.