ಬೆಂಗಳೂರು: ನೋಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಲಾರಿ ಟರ್ನ್ ಮಾಡುವ ವೇಳೆ ಡಿಕ್ಕಿ ಹೊಡೆದಿದ್ದರಿಂದ ಕಾನ್ಸ್ಟೆಬಲ್ ಅರುಣ್ (35) ಎಂಬುವರು ಮೃತಪಟ್ಟಿದ್ದಾರೆ.
ಭದ್ರಾವತಿ ಮೂಲದ ಅರುಣ್, ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ, ಮಕ್ಕಳ ಜತೆ ಅಂಜನಾಪುರದಲ್ಲಿ ಅವರು ವಾಸವಿದ್ದರು. ಘಟನೆ ನಂತರ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಲಾರಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿಯೊಂದಿಗೆ ಬೈಕ್ನಲ್ಲಿ ಠಾಣೆ ಕಡೆಗೆ ಹೊರಡಲು ಮುಂದಾದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಾಗ ಅವರ ಮೈಮೇಲೆ ಟಿಪ್ಪರ್ ಹರಿದು ಹೋಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.
Advertisement