ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು ದೂರು ದಾಖಲಿಸಿದ್ದಾರೆ.
ಈ ಸಂಬಂಧ ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ಮಟ್ಟು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಎಂ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಐಡಿಯ ಸೈಬರ್ ವಿಭಾಗಕ್ಕೆ ದೂರು ಸಲ್ಲಿಸಲಾಗಿದೆ.
ಟ್ವಿಟರ್ನಲ್ಲಿ CMofKarnataka ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿದ್ದರು. ಆದರೆ ಆ ಖಾತೆ ಡಿಆ್ಯಕ್ಟಿವೇಟ್ ಆಗಿತ್ತು. ಆದರೆ ಈಗ ಮತ್ತೆ ಅದೇ ಖಾತೆಯಿಂದ ಗೊಂದಲಕಾರಿ ಹಾಗೂ ಅವಹೇಳನಕಾರಿಯಾದ ಸಂದೇಶಗಳು ಬರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಮ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement