ಕೇಂದ್ರ ಅಪರಾಧ ವಿಭಾಗ ತನಿಖೆ ನಡೆಸಿದ ಸುಮಾರು 900 ಪ್ರಕರಣಗಳು 63 ಕೋರ್ಟ್ ಗಳಲ್ಲಿ ವಿಚಾರಣೆಯಾಗದೆ ಬಾಕಿ ಉಳಿದಿವೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರಿಗೆ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಈಗೀರುವ ಕೋರ್ಟ್ ಗಳಲ್ಲಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.