ರೈತರ ಸಾಲಮನ್ನಾ ಸಾಧ್ಯವಿಲ್ಲ: ಸಿದ್ದರಾಮಯ್ಯ

ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ಪರಿಸ್ಥಿತಿಯಲ್ಲಿ ಅಸಾಧ್ಯ. ಸಾಲ ವಸೂಲು ಮಾಡದಂತೆ ಬ್ಯಾಂಕ್‌ಗಳಿಗೆ ತಾಕೀತು ಮಾಡಲಾಗಿದೆ. ಸುಸ್ತಿ ಬಡ್ಡಿ ಮನ್ನಾ ಮಾಡಿದ್ದು...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ಪರಿಸ್ಥಿತಿಯಲ್ಲಿ ಅಸಾಧ್ಯ. ಸಾಲ ವಸೂಲು ಮಾಡದಂತೆ ಬ್ಯಾಂಕ್‌ಗಳಿಗೆ ತಾಕೀತು ಮಾಡಲಾಗಿದೆ. ಸುಸ್ತಿ ಬಡ್ಡಿ ಮನ್ನಾ ಮಾಡಿದ್ದು, ಈ ವರ್ಷ ಬರಗಾಲ ಇರುವುದರಿಂದ ಬಡ್ಡಿ ಪಾವತಿಗೆ ಕಾಲಾವಕಾಶ ನೀಡಲಾಗಿದೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ರೈತ ಸಂಘಟನೆಗಳು, ರೈತ ಮುಖಂಡರ ಜತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆಯಲ್ಲಿ ರೈತ ಪ್ರತಿನಿಧಿಗಳು ಮಾಡಿದ ಮನವಿಗೆ ಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

ರೈತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಲಾರೆ. ಆದ್ಯತೆ ಮೇರೆಗೆ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಸರಕಾರ  ಶ್ರಮಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ರೈತರಿಗೆ ಅನುಕೂಲಕಾರಿ ಯೋಜನೆಗಳ ಅನುಷ್ಠಾನ ಮಾಡಲು, ರೈತರಲ್ಲಿ ವಿಶ್ವಾಸ ಮೂಡಿಸಲು ಯೋಜನೆಗಳನ್ನು ರೂಪಿಸಲು ಸಲಹೆ ನೀಡಿ ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com