ಖಾಸಗಿ ಬಸ್ಸು ನಿರ್ವಾಹಕರು ಇದನ್ನು ಒಪ್ಪುತ್ತಿಲ್ಲ. ನೂತನ ನಿರ್ವಾಹಕರಿಗೆ ನಿಷೇಧವನ್ನು ಹೇರಬೇಕೆಂದು ಅವರು ಒತ್ತಾಯಿಸುತ್ತಿದ್ದರೂ ಸಾರಿಗೆ ಇಲಾಖೆ ತನ್ನ ನಿಲುವನ್ನು ಬದಲಾಯಿಸುತ್ತಿಲ್ಲ. '' ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕೇವಲ ಮಾಲಿನ್ಯಕ್ಕೆ ಸಂಬಂಧಿಸಿಲ್ಲ. ಖಾಸಗಿ ಬಸ್ಸುಗಳು ನಗರದಲ್ಲಿ ಸಂಚಾರ ದಟ್ಟಣೆಯನ್ನು ಸೃಷ್ಟಿಸುತ್ತದೆ ಎಂದು ಹಲವಾರು ದೂರುಗಳು ನಮಗೆ ಬಂದಿವೆ. ಪ್ರಯಾಣಿಕರನ್ನು ಹತ್ತಿಸುವುದು, ಇಳಿಸುವುದು ಹೇಗೆ ಎಂಬ ಪ್ರಶ್ನೆ ಕೇಳುತ್ತಾರೆ, ಎಲ್ಲಾ ಮಾರ್ಗಗಳಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿರುವಾಗ ಪ್ರಯಾಣಿಕರಿಗೆ ತೊಂದರೆಯಾಗುವುದಿಲ್ಲ. ಕೆಲವು ಮಾರ್ಗಗಳಲ್ಲಿ ಮೆಟ್ರೋ ಸೇವೆ ಕೂಡ ಪ್ರಯಾಣಿಕರಿಗೆ ಲಭ್ಯವಿರುತ್ತದೆ ಎನ್ನುತ್ತಾರೆ ಅಧಿಕಾರಿಗಳು.