ಬೆಂಗಳೂರು; ರಂಜಾನ್ ನಿಮಿತ್ತ ನಾಳೆ ಅಂದರೆ ಜುಲೈ 7 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈದ್ ಉಲ್ ಪಿತ್ರ್ ಹಿನ್ನೆಲೆಯಲ್ಲಿ ಮಂಗಳವಾರ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ ರಂಜಾನ್ ಆಚರಣೆ ಮಾಡಲು ಕೇಂದ್ರೀಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ’ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಳಿದ್ದಾರೆ.
ಜುಲೈ 7ರಂದು ಪಿಯುಸಿ ಪೂರಕ ಪರೀಕ್ಷೆ ನಡೆಯಬೇಕಿತ್ತು, ಆದರೆ ಸರ್ಕಾರಿ ರಜೆ ಇರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ದಿನಾಂಕ ಪ್ರಕಟಿಸುವುದಾಗಿ ಪಿಯು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ
Advertisement