ಬೆಂಗಳೂರು: ಕೋರಮಂಗಲದ 7ನೇ ಬ್ಲಾಕ್ ನಲ್ಲಿ ಕಟ್ಟಡ ನಿರ್ಮಾಣ ಸೈಟಿನಲ್ಲಿ ಗುಂಡಿಯೊಂದನ್ನು ಅಗೆಯುವಾಗ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಾಯವಾಗಿದ ಘಟನೆ ನಿನ್ನೆ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಮತ್ತು ತುರ್ತು ಸೇವೆ ಇಲಾಖೆಯವರು ಹತ್ತಿರದ ಮನೆಗಳ ನಿವಾಸಿಗಳನ್ನು ಸುರಕ್ಷತೆ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.