ನಾಪತ್ತೆಯಾಗಿರುವ ಮರೀಗೌಡ ಕಾರು ವಶಕ್ಕೆ ಪಡೆದ ಪೊಲೀಸರು

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ನಾಪತ್ತೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಅವರ ಕಾರನ್ನು ರಾಜ್ಯ ಪೊಲೀಸರು...
ಮರೀಗೌಡ ಹಾಗೂ ಜಿಲ್ಲಾಧಿಕಾರಿ ಸಿ. ಶಿಖಾ
ಮರೀಗೌಡ ಹಾಗೂ ಜಿಲ್ಲಾಧಿಕಾರಿ ಸಿ. ಶಿಖಾ
Updated on

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ನಾಪತ್ತೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಅವರ ಕಾರನ್ನು ರಾಜ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರಿಗಿರುವಾಗಲೇ ಮರೀಗೌಡ ಅವರು ಶಿಖಾ ಅವರಿದೆ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಲೇ ಮರೀಗೌಡ ಅವರು ನಾಪತ್ತೆಯಾಗಿದ್ದರು. ಈ ಬೆನ್ನಲ್ಲೇ ಮರೀಗೌಡ ಅವರಿಗೆ ಸೇರಿದೆ ಎನ್ನಲಾಗಿರುವ ಫಾರ್ಚೂನರ್ ಕಾರೊಂದನ್ನು ಮಂಡ್ಯದ ಎಂಜಿ ಬಡಾವಣೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಯ ಬಳಿ ಕಾರನ್ನು ನಿಲ್ಲಿಸಿದ್ದ ಮರೀಗೌಡ ಅವರು, ಎರಡು ದಿನಗಳ ನಂತರ ಕಾರನ್ನು ತೆಗೆದುಕೊಂಡು ಹೋಗುತ್ತೇನೆಂದು ಹೇಳಿದ್ದರು. ಆದರೆ, ಈ ವರೆಗೂ ಕಾರನ್ನು ತೆಗೆದುಕೊಂಡು ಹೋಗಿಲ್ಲ ಎಂದು ಸ್ನೇಹಿತ ಆನಂದ್ ಎಂಬುವವರು ಹೇಳಿಕೊಂಡಿದ್ದಾರೆ. ಮಾಧ್ಯಮಗಳು ನೀಡಿದ ವರದಿ ಆಧರಿಸಿ ನಜಾರ್ ಬಾದ್ ಠಾಣೆಯ ಪೊಲೀಸರು ಇದೀಗ ಕಾರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com