ನಾಲ್ಕು ದಿನಗಳ ಹಿಂದೆ ನಡೆದಿದ್ದ ಘಟನೆ ಇಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಪಿಎಸ್ಐ ವಶಕ್ಕೆ ಪಡೆದಿದ್ದ ಮರಳು ಲಾರಿಯನ್ನು ಬಿಟ್ಟು ಕಳುಹಿಸಿ ಎಂದು ಹೆಬ್ಬಾಳ್ಕರ್ ದೂರವಾಣಿ ಮೂಲಕ ಪಿಎಸ್ಐಗೆ ಹೇಳಿದ್ದಾರೆ. ಇದಕ್ಕೆ ಪಿಎಸ್ಐ ಇಲ್ಲ ಮೇಡಂ ಡಿಸಿ ಅವರ ಆದೇಶದ ಮೇರೆಗೆ 6 ಗಂಟೆ ನಂತರ ಸಂಚರಿಸುವ ಮರಳು ಲಾರಿಯನ್ನು ವಶಪಡಿಸಿಕೊಳ್ಳಲು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.