ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಕ್ಕಳಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಬಿನಿಶ್ ಥಾಮಸ್ ಎಂಬ ಹಲಸೂರಿನ ಗೌತಮಪುರದ ಸಾಮಾಜಿಕ ಕಾರ್ಯಕರ್ತ ಈ ಮಕ್ಕಳಿಗೆ ಉಚಿತ ಸಂಚಾರ ಸಾರಿಗೆ ವ್ಯವಸ್ಥೆ ನೀಡುವುದಾಗಿ ಹೇಳಿದ್ದಾರೆ. ಅವರು ಮೊನ್ನೆ ಮಂಗಳವಾರ ಶಾಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.