ಪರಿಸರ ನಾಶ ದೂರವಾಗಬೇಕು : ಸಿದ್ದರಾಮಯ್ಯ

ಪರಿಸರ ನಾಶ ಮಾಡುವುದೆಂದರೆ ಜನರಿಗೆ ರೋಗದಂತೆ ಅಂಟಿಕೊಂಡುಬಿಟ್ಟಿದೆ, ಇದನ್ನು ದೂರ ಮಾಡಬೇಕು...
ಗಿಡಕ್ಕೆ ನೀರೆರೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗಿಡಕ್ಕೆ ನೀರೆರೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Updated on

ಬೆಂಗಳೂರು: ಪರಿಸರ ನಾಶ ಮಾಡುವುದೆಂದರೆ ಜನರಿಗೆ ರೋಗದಂತೆ ಅಂಟಿಕೊಂಡುಬಿಟ್ಟಿದೆ, ಇದನ್ನು ದೂರ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ಪ್ರಾಣಿ ಪಕ್ಷಿಗಳ ಸಂಖ್ಯೆ ಕ್ಷೀಣವಾಗುತ್ತಿದೆ ಎಂದರು.

ನಾವು ಕಾಡು ಬೆಳೆಸಿಲ್ಲ, ಉಳಿಸಿಲ್ಲ ಹೀಗಾಗಿ ಹವಮಾನದಲ್ಲಿ ಸಾಕಷ್ಟು ಏರುಪೇರಾಗಿದೆ. ಭೂಮಿಯ  ಶೇಕಡಾ 3/1 ರಷ್ಟು ಅರಣ್ಯ ಇರಬೇಕು ಆದರೆ ಕರ್ನಾಟಕದಲ್ಲಿ 20% ಮಾತ್ರ ಇದೆ ಎಂದು ವಿಷಾದ ವ್ಯಕ್ತ ಪಡಿಸಿದರು.
ಇದೇ ವೇಳೆ ಸರಕಾರದ ವತಿಯಿಂದ ಮೂವರು ವ್ಯಕ್ತಿಗಳು ಮತ್ತು ಮೂರು ಸಂಸ್ಥೆಗಳಿಗೆ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com