ಹುಬ್ಬಳ್ಳಿ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸತೀಶ್ ಯಂಕಪ್ಪ ಸಯನ್ನವಾರ್ (31) ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ. ಅರನ್ಪುರ ಗ್ರಾಮದಲ್ಲಿದ್ದ ಕ್ಯಾಂಪೊದರಲ್ಲಿ ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಂದಿರುವ ಸತೀಶ್ ಅವರು ಇದ್ದಕ್ಕಿದ್ದಂತೆ ಇನ್ಸಾಸ್ ರೈಫಲ್ ತೆಗೆದುಕೊಂಡು ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಸತೀಶ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಈಗಾಗಲೇ ನ್ಯಾಯಾಲಯ ತನಿಖೆಗೆ ಆದೇಶಿಸಿದ್ದು, ತನಿಖೆ ನಂತರವಷ್ಟೇ ಆತ್ಮಹತ್ಯೆಗೆ ಪ್ರಮುಖ ಕಾರಣವೇನು ಎಂಬುದು ಹೊರಬರಬೇಕಿದೆ.
ಸತೀಶ್ ಕಳೆದ 11 ವರ್ಷಗಳಿಂದಲೂ 231 ಬೆಟಾಲಿಯನ್ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸಿದ್ದು, ಮೂಲತಃ ಹುಬ್ಬಳ್ಳಿಯ ಅಮರ್ಗೋಲ್ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ.
Advertisement