ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದ ಅನುಪಮಾ ಶೆಣೈ ಅವರಿಗೆ ಕೊಲೆ ಬೆದರಿಕೆ?

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಮಿಕ ಸಚಿವ ಪಿಟಿ ಪರಮೇಶ್ವರ್ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಮತ್ತೊಮ್ಮೆ ಫೇಸ್ ಬುಕ್ ನಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದ್ದಿದಾರೆ.
ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದ ಅನುಪಮಾ ಶೆಣೈ ಅವರಿಗೆ ಕೊಲೆ ಬೆದರಿಕೆ?
Updated on

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಮಿಕ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಮತ್ತೊಮ್ಮೆ ಫೇಸ್ ಬುಕ್ ನಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದ್ದಿದಾರೆ.
'#ಪರಮೇಶಿ ಪ್ರೇಮಪ್ರಸಂಗ ಭಾಗ-1#...ಸಿಡಿ ಬೇಕೋ, ಆಡಿಯೋ ಬೇಕೋ' ಎಂದು ಪ್ರಶ್ನಿಸಿದ್ದ ಅನುಪಮಾ ಶೆಣೈ ಈಗ ಸಿಡಿ ಬಿಡುಗಡೆ ಮಾಡುತ್ತೇನೆ ಎಂದಿದ್ದಕ್ಕೆ ಕೊಲೆ ಬೆದರಿಕೆ ಬಂದಿದೆ ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದು, ಕೊಲೆ ಬೆದರಿಕೆಗೂ ಹೆದರುವುದಿಲ್ಲ, ಕೊಲೆ ಮಾಡಿದರೂ ದೆವ್ವವಾಗಿ ಬಂದು ಕಾಡ್ತೀನಿ ಎಂದು ಪೋಸ್ಟ್ ಅಪ್ ಡೇಟ್ ಮಾಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರ ಪರವಾಗಿ ಲಾಬಿ ನಡೆಸುತ್ತಿರುವುದರ ವಿಚಾರವಾಗಿ ಅಸಮಾಧಾನಗೊಂದಿದ್ದ ಅನುಪಮಾ ಶೆಣೈ ಕೂಡ್ಲಗಿ ಕೂಡ್ಲಿಗಿ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಬಳಿಕ ಸರಣಿ ಫೇಸ್ ಬುಕ್ ಪೋಸ್ಟ್ ಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಕೂಡ್ಲಗಿ ಶಾಸಕ, ಸಚಿವ ಪರಮೇಶ್ವರ್ ನಾಯ್ಕ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಫೇಸ್ ಬುಕ್ ಸಮರದ ಮುಂದುವರೆದ ಭಾಗವಾಗಿ '#ಪರಮೇಶಿ ಪ್ರೇಮಪ್ರಸಂಗ ಭಾಗ-1#...ಸಿಡಿ ಬೇಕೋ, ಆಡಿಯೋ ಬೇಕೋ' ಎಂಬ ಹ್ಯಾಶ್ ಟ್ಯಾಗ್ ಬಳಸಿ ಪರಮೇಶ್ವರ್ ನಾಯ್ಕ್ ಅವರಿಗೆ ಸಂಬಂಧಿಸಿದ ಸಿಡಿಯನ್ನು ಬಿಡುಗಡೆ ಮಾಡುವುದಾಗಿ ಅನುಪಮಾ ಶೆಣೈ ಫೇಸ್ ಬುಕ್ ನಲ್ಲಿ ಹೇಳಿದ್ದರು. ಈ ಪೋಸ್ಟ್ ಅಪ್ ಡೇಟ್ ಆದ ಕೆಲವು ಗಂಟೆಗಳ ನಂತರ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಟೇಟಸ್ ಅಪ್ ಡೇಟ್ ಮಾಡಿರುವ ಅನುಪಮಾ ಶೆಣೈ, ಸಿಡಿ ಬಿಡುಗಡೆ ಮಾಡುತ್ತೀನಿ ಎಂದಿದ್ದರೆ ಕೊಲೆ ಬೆದರಿಕೆ ಹಾಕ್ತೀರಾ? ದೆವ್ವವಾಗಿ ಬಂದು ಕಾಡ್ತೀನಿ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com