ಸಚ್ಚಿದಾನಂದ ವಾಲುಕೇಶ್ವರ ಭಾರತೀ ಸ್ವಾಮಿಗಳ ಉತ್ತರಾಧಿಕಾರಿಗಳಾಗಿರುವ ಕೂಡಲಿ ಶೃಂಗೇರಿ ಪೀಠದ ಕಿರಿಯ ಸ್ವಾಮಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮಿಗಳು ಹಿರಿಯ ಶ್ರೀಗಳ ಅಂತ್ಯಕ್ರಿಯೆ ನಡೆಸಲಿದ್ದಾರೆ. ಬ್ರಹ್ಮೈಕ್ಯರಾಗಿರುವ ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಸ್ವಾಮಿಗಳ ಅವರ ಅವಧಿಯಲ್ಲಿ ಕೂಡಲಿ ಶೃಂಗೇರಿ ಪೀಠ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಶ್ರೀಗಳು ದಕ್ಷಿಣ ಭಾರತವಷ್ಟೇ ಅಲ್ಲದೇ, ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದಲ್ಲೂ ಅಪಾರ ಸಂಖ್ಯೆಯ ಭಕ್ತಾದಿಗಳನ್ನು ಹೊಂದಿದ್ದಾರೆ.