ಎಲ್ಲರ ಚಿತ್ತ ಮಂತ್ರಿ ಪರಿಷತ್ ಸಭೆಯತ್ತ: ಸಂಪುಟ ಪುನರ್ರಚನೆ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂತ್ರಿ ಪರಿಷತ್ ಸಭೆ ಕರೆದಿದ್ದು, ಸಚಿವ ಸಂಪುಟ ಪುನರ್ರಚನೆ ನಡೆಯಲಿರುವ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂತ್ರಿ ಪರಿಷತ್ ಸಭೆ ಕರೆದಿದ್ದು, ಸಚಿವ ಸಂಪುಟ ಪುನರ್ರಚನೆ ನಡೆಯಲಿರುವ ಸಾಧ್ಯತೆಯಿರುವುದರಿಂದ ಎಲ್ಲರ ದೃಷ್ಟಿ ಅತ್ತ ನೆಟ್ಟಿದೆ. ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಮತ್ತು ಸಚಿವ ಸ್ಥಾನ ಉಳಿಸಿಕೊಳ್ಳುವವರ ಒತ್ತಡ ತೀವ್ರಗೊಂಡಿದೆ.

ಇಂದು ಬೆಳಗ್ಗೆ 10.30ಕ್ಕೆ ಸಭೆ ನಿಗದಿಯಾಗಿದ್ದು, ರಾಜ್ಯಸಭೆ ಸಚಿವರು ಸೇರಿದಂತೆ ಕ್ಯಾಬಿನೆಟ್ ದರ್ಜೆ ಸಚಿವರೆಲ್ಲಾ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟ ಪುನರ್ರಚನೆಯ ಸುಳಿವು ಸಿಗುತ್ತಿದ್ದಂತೆ ಸಚಿವರಾದ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ರೋಷನ್ ಬೇಗ್ ಸೇರಿದಂತೆ ಅನೇಕ ಸಚಿವರು ದೆಹಲಿಯಲ್ಲಿ ತಂಗಿದ್ದಾರೆ. ಇನ್ನು ಸಚಿವಾಕಾಂಕ್ಷಿ ಹೊಂದಿರುವ ಕೆಲವು ಶಾಸಕರು ತಮ್ಮ ನಾಯಕರ ಮತ್ತು ಕಚೇರಿಗಳಿಗೆ ಎಡತಾಕುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com