ಇಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಬಗ್ಗೆ ಪ್ರತಿಕ್ರಿಯಿಸಿದ ಸಂತೋಷ್ ಹೆಗ್ಡೆ ಅವರು, ಮುಖ್ಯಮಂತ್ರಿಗಳು ಉಡುಗೊರೆ ಪಡೆಯುವುದು ಹಾಗೂ ಅದನ್ನು ಬಳಸುವುದು ತಪ್ಪು ಮಾತ್ರವಲ್ಲ. ಅದೊಂದು ಅಪರಾಧ ಎಂದು ಅಭಿಪ್ರಾಯ ಪಟ್ಟರು. ಅಲ್ಲದೆ ಸಿಎಂ ವಾಚ್ ಅನ್ನು ಈ ಮೊದಲೇ ಸರ್ಕಾರಕ್ಕೆ ಹಸ್ತಾಂತರ ಮಾಡಬೇಕಿತ್ತು ಎಂದರು.