ಆರು ಮಂದಿ ದರೋಡೆಕೋರರ ಬಂಧನ

ಮನೆಗಳಿಗೆ ನುಗ್ಗಿ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಸವೇಶ್ವರನಗರದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಮನೆಗಳಿಗೆ ನುಗ್ಗಿ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಸವೇಶ್ವರನಗರದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರು ದರೋಡೆಕೋರರು ಬೈಕ್ ಗಳಲ್ಲಿ ನಗರದ ವಿವಿಧೆಡೆ ಸುತ್ತಾಡುತ್ತಾ ಮಧ್ಯರಾತ್ರಿ ವೇಳೆ ಮನೆಗೆ ನುಗ್ಗಿ ದರೋಡೆ ಮಾಡುತ್ತಿದ್ದರು. 
ದಿಲೀಪ್, ತೇಜಸ್, ಭರತ್, ಅರ್ಜುನ್, ಶಶಿಕುಮಾರ್ ಹಾಗೂ ಪುನೀತ್ ಬಂಧಿತ ಆರೋಪಿಗಳು. ಈ ಎಲ್ಲಾ ಆರೋಪಿಗಳು ಸುಮಾರು 18ರಿಂದ 20 ವರ್ಷದೊಳಗಿನವರು. ಮೋಜು ಮಸ್ತಿ ಮಾಡಲೆಂದು ದರೋಡೆ ಮಾಡುತ್ತಿದ್ದುದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. 
ರಾತ್ರಿ 12 ಗಂಟೆ ನಂತರ ಜನರ ಓಡಾಟ ಕಡಿಮೆಯಾಗುತ್ತಿದ್ದಂತೆ, ಒಂಟಿ ಮನೆ ಬಾಗಿಲನ್ನು ತಟ್ಟುತ್ತಿದ್ದ ಈ ಆರೋಪಿಗಳು, ಚಾಕು ತೋರಿಸಿ, ಕೈಗೆ ಸಿಕ್ಕ ಚಿನ್ನಾಭರಣೆ ಮತ್ತು ಹಣವನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು. 
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com