ಮಂಡ್ಯ: ಮೇಲುಕೋಟೆ ಶ್ರೀ ಚೆಲುವ ನಾರಾಯಣಸ್ವಾಮಿ ವೈರಮುಡಿ ಕಿರೀಟ ಧಾರಣೆ ಮಹೋತ್ಸವ ಮಾ.19ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಮಂಡ್ಯ ಜಿಲ್ಲಾ ಖಜಾನೆಯಲ್ಲಿ ವಜ್ರ ಖಚಿತ ವಾದ ವೈರಮುಡಿ-ರಾಜಮುಡಿ ಕಿರೀಟಗಳನ್ನು ಮೇಲುಕೋಟೆಗೆ ತಂದು ಜಿಲ್ಲಾಧಿಕಾರಿಗಳು ಮತ್ತು ಸ್ಥಾನಿಕರು, ಅರ್ಚಕರ ಸಮಕ್ಷಮ ಪರಿಶೀಲಿಸಿದ ನಂತರ ವೈರಮುಡಿ ಕಿರೀಟವನ್ನು ರಾತ್ರಿ 8 ಗಂಟೆಗೆ ಗರುಡಾರೂಢನಾದ ಚೆಲುವನಾರಾಯಣನಿಗೆ ತೊಡಿಸಲಾಗುತ್ತದೆ.
ಬೆಳಗಿನ 4 ಗಂಟೆಯವರೆಗೆ ಉತ್ಸವ ನೆರವೇರಿಸಲಾಗುತ್ತದೆ. ವೈರಮುಡಿ ಉತ್ಸವ ನಂತರ ರಾಜಮುಡಿ ಉತ್ಸವ ಸಹ ನೆರವೇರಲಿದೆ.
ವೈರಮುಡಿ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು ಮಾ-26ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಏಳನೇಯ ದಿನವಾದ ಮಾ.22ರ ಬೆಳಗ್ಗೆ ಮಹಾರಥೋತ್ಸವ ಅದ್ದೂರಿಯಾಗಿ ನಡೆಯಲಿದೆ. ರಾತ್ರಿ ರಾಮಾನುಜಾಚಾರ್ಯರ ಕಾಲದಿಂದ ನಡೆದುಕೊಂಡು ಬಂದ ಪದ್ಧತಿಯಂತೆ ಹರಿಜನರ ಬಂಗಾರದ ಪಲ್ಲಕ್ಕಿ ಉತ್ಸವ ನೆರವೇರಲಿದೆ.
Advertisement