ಬೆಂಗಳೂರಿನಲ್ಲಿ ಹಾಡಹಗಲೇ ಬೈಕ್ ಅಡ್ಡಗಟ್ಟಿ ರು.9 ಲಕ್ಷ ದರೋಡೆ

ದುಷ್ಕರ್ಮಿಗಳು ಹಾಡುಹಗಲೇ ಬೈಕ್ ಅಡ್ಡಗಟ್ಟಿ 9 ಲಕ್ಷ ರುಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಬೆಂಗಳೂರಿನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ದುಷ್ಕರ್ಮಿಗಳು ಹಾಡುಹಗಲೇ ಬೈಕ್ ಅಡ್ಡಗಟ್ಟಿ 9 ಲಕ್ಷ ರುಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮೇಲ್ವಿಚಾರಕ ವಿಶ್ವ ಎಂಬುವವರು 9 ಲಕ್ಷ ರುಪಾಯಿನ್ನು ಹಣವನ್ನು ಬ್ಯಾಂಕ್ ಗೆ ಕಟ್ಟಲು ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎರಡು ಪಲ್ಸರ್ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹಣದ ಬ್ಯಾಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com