ಕೋಲಾರ ಮತ್ತು ಬಳ್ಳಾರಿಯ ಎರಡು ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಯಾದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ರದ್ದುಗೊಳಿಸಿದ್ದು, ಮಾರ್ಚ್ 29ಕ್ಕೆ ಮರು ಪರೀಕ್ಷೆಗೆ ಆದೇಶಿಸಿದೆ. ಆದರೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ನಿನ್ನೆ ಪಿಯು ಬೋರ್ಡ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.