ದೇಹವನ್ನು ಸಾಧ್ಯವಾದಷ್ಟು ಅನಾರೋಗ್ಯದಿಂದ ದೂರ ಇಡಲು ಸಹಕಾರಿಯಾಗುವ ಆಹಾರ ಕ್ರಮಗಳ ಬಗ್ಗೆ 10 ವರ್ಷದ ಬಾಲಕ ಅಭಿಗ್ಯ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಅಭಿಯಾನ ಕೈಗೊಂಡಿದ್ದಾನೆ. ಈತ ಆಹಾರ ಕ್ರಮಗಳ ಬಗ್ಗೆ ಮಾತ್ರ ಜಾಗೃತಿ ಮೂಡಿಸುವುದರೊಂದಿಗೆ ಇನ್ನಿತರ ಚಟುವಟಿಕೆಗಳಲ್ಲೂ ಸಕ್ರಿಯನಾಗಿದ್ದಾನೆ. ಮೈಸೂರಿನ ಸರ್ಕಾರಿ ಶಾಲೆಯಲ್ಲಿ 6 ನೇ ತರಗತಿ ಓದುತ್ತಿರುವ ಅಭಿಗ್ಯ ಏಳನೇ ವಯಸ್ಸಿಗೇ ಭಗವದ್ಗೀತೆಯ ಅಷ್ಟೂ ಶ್ಲೋಕಗಳನ್ನು ಕಂಠಪಾಠ ಮಾಡಿದ್ದಾನೆ. ತನ್ನ ಕೌಶಲ್ಯದಿಂದ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಅಭಿಗ್ಯ, ಮೈಸೂರಿನ ಕಾಲೇಜುಗಳಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದು, ಭಾರತ ಹಾಗೂ ಜರ್ಮನಿಯ ಅನೇಕ ಶಾಲೆಗಳಿಗೆ ಭೇಟಿ ನೀಡಿ ಮಾತನಾಡಿದ್ದಾನೆ.